ಪಕ್ಷ ಬಿಟ್ಟು ಹೋದೋರು ವಾಪಸ್ ಬರುವ ಬಗ್ಗೆ ಡಿಕೆಶಿ ಮಾತು..!

ಬೆಂಗಳೂರು : ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ ಸೇರಿದ ಕಾಂಗ್ರೆಸ್ ನ ಹದಿನೇಳು ಮಂದಿ ಶಾಸಕರು ವಾಪಸ್ ಪಕ್ಷಕ್ಕೆ ಮರಳಲು ವೇದಿಕೆ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸುದ್ದಿಗಾರರು ಇಂದು ಸದಾಶಿವನಗರದ ಅವರ ನಿವಾಸದ ಬಳಿ ನೇರವಾಗಿ ಕೇಳಿದಾಗ, ರಾಜಕೀಯದಲ್ಲಿ ಯಾವಾಗ ಏನಾಗುತ್ತೆ ಅಂತಾ ಹೇಳಲಾಗದು. ಏನುಬೇಕಾದರೂ ಆಗಬಹುದು ಅಂತಾ ಒಗಟಾಗಿ ಹೇಳಿದರು. ಈ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿದ್ದವರ ಪೈಕಿ ಮೊದಲ ಹಂತದಲ್ಲಿ ಒಂದಷ್ಟು ಶಾಸಕರು ಮರಳಕಿದ್ದಾರೆಂಬುದನ್ನು ಪರೋಕ್ಷವಾಗಿ ಹೇಳಿದಂತಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement