ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

 

ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ  ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ವಿವಿಧ ಯೋಜನೆಯಡಿ ಆರ್ಥಿಕ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಲಾಗಿದೆ. ಅರ್ಜಿ ಸಲ್ಲಿಸಲು ನವಂಬರ್ 30 ಕೊನೆಯ ದಿನ.

ಪರಿಶಿಷ್ಟ ಜಾತಿ: ಸ್ವಯಂ ಉದ್ಯೋಗ (ನೇರಸಾಲ) ಯೋಜನೆ (ಘಟಕ ವೆಚ್ಚ ರೂ 1ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಾಣಿಕೆ/ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ), ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement

ಪರಿಶಿಷ್ಟ ಪಂಗಡ: ಸ್ವಯಂ ಉದ್ಯೋಗ (ನೇರಸಾಲ) ಯೋಜನೆ (ಘಟಕ ವೆಚ್ಚ ರೂ 1ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಣಿಕೆ ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಫಲಾಪೇಕ್ಷಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್‍ಗಳಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement