ಪಿಎಂ ಕಿಸಾನ್‌ 16 ನೇ ಕಂತು ಬಿಗ್‌ ಅಪ್ಡೇಟ್..! ರೈತರಿಗೆ ದುಪ್ಪಟ್ಟು ಹಣ

ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗಲಿದ್ದು, ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 31 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಮಧ್ಯಂತರ ಬಜೆಟ್‌ನಲ್ಲಿ ಪ್ರಮುಖ ಘೋಷಣೆಗಳ ಸಾಧ್ಯತೆಗಳು ತೀರಾ ಕಡಿಮೆ. ಆದಾಗ್ಯೂ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಕೃಷಿ ಮಹಿಳೆಯರಿಗೆ ಆರ್ಥಿಕ ನೆರವು ದ್ವಿಗುಣಗೊಳ್ಳಬಹುದು ಎಂದು ಹೇಳಲಾಗುತ್ತದೆ. ಫೆಬ್ರವರಿ 1ರ ಬಜೆಟ್ ನಲ್ಲಿ ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಹೊರಬೀಳಬಹುದು ಎಂದು ವರದಿಗಳು ಹೇಳುತ್ತಿವೆ.

ಪಿಎಂ ಕಿಸಾನ್ ಯೋಜನೆಯಡಿ ಈಗ ವಾರ್ಷಿಕ ರೂ 6,000 ನೀಡಲಾಗುತ್ತಿದೆ. ಮಹಿಳಾ ರೈತರಿಗೆ ಇದು 12,000 ರೂ.ಗೆ ಹೆಚ್ಚಾಗಬಹುದು. ಅಂದರೆ, ಭೂಮಿ ಹೊಂದಿರುವ ಮಹಿಳೆಯರು ಹೆಚ್ಚಿನ ಹಣವನ್ನು ಪಡೆಯಬಹುದು. ಇದಲ್ಲದೇ ಮಧ್ಯಂತರ ಬಜೆಟ್ ನಲ್ಲಿ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

Advertisement

ಈ ಹಿಂದೆ, ಕೆಲವು ವರದಿಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಯಲ್ಲಿ ಹಣವನ್ನು ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹೇಳಲಾಗಿದೆ. 6,000 ಅನುದಾನದ ಮೊತ್ತವನ್ನು 8,000 ರೂ.ಗೆ ಹೆಚ್ಚಿಸಬಹುದು ಎಂದು ಹೇಳಲಾಗಿದೆ. ಬಜೆಟ್ ಮಂಡನೆಗೆ ಒಂದು ದಿನ ಮುಂಚಿತವಾಗಿ ಅಂದರೆ ಜನವರಿ 31 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುತ್ತದೆ.

ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಇಂಡಿಯಾ ಟುಡೇ ವರದಿ ಪ್ರಕಾರ ಫೆಬ್ರವರಿ 9ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಜನವರಿ 31ರಿಂದ 11 ದಿನಗಳ ಕಾಲ ಅಧಿವೇಶನ ನಡೆಯುವ ಸಾಧ್ಯತೆ ಇದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement