‘ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ’ – ಸಿಎಂ

ಬೆಂಗಳೂರು: ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದರು.

Advertisement

ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.

ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸ್‌ ಜಾರಿ ಮಾಡಿತ್ತು ಎಂದು ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement