ಬಹರೈನ್ ನಲ್ಲಿ ಸ್ಟೇಟಸ್ ಹಾಕಿ ಕೆಲಸ ಕಳ್ಕೊಂಡ ಕರ್ನಾಟಕದ ವೈದ್ಯ..!

ಬೆಂಗಳೂರು: ಹಮಾಸ್ ಉಗ್ರ ಸಂಘಟನೆ ಮತ್ತು ಇಸ್ರೇಲ್ ನ ನಡುವಿನ ಯುದ್ಧದ ವಿಚಾರಕ್ಕೆ ಸಂಬಂಧಪಟ್ಟಂತೆ ಬಹರೈನ್ ನಲ್ಲಿ ಉದ್ಯೋಗದಲಿದ್ದ ಕರ್ನಾಟಕ ಮೂಲದ ವೈದ್ಯರೊಬ್ಬರು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಸ್ಟೇಟಸ್ ಹಾಕಿದಕ್ಕೆ ಉದ್ಯೋಗ ಕಳೆದುಕೊಂಡಿರುವ ಘಟನೆ ನಡೆದಿದೆ.

ಡಾ.ಸುನೀಲ್ ಜೆ. ರಾವ್ ಎಂಬ ಉದ್ಯೋಗ ಕಳೆದುಕೊಂಡ ವೈದ್ಯರಾಗಿದ್ದಾರೆ. ಇವರು ಬಹರೈನ್ ನ ದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ಯಾಲೆಸ್ತೀನಿಯರ ವಿರುದ್ಧ ಎಕ್ಸ್ ನಲ್ಲಿ ಸ್ಟೇಟಸ್ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಸ್ಟೇಟಸ್​ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದರೂ ಉದ್ಯೋಗ ಕಳೆದುಕೊಂಡಿದ್ದಾರೆ

ನನ್ನ ಮಾತು ಮತ್ತು ಕಾರ್ಯಗಳಿಗಾಗಿ ನಾನು ತೀವ್ರವಾಗಿ ವಿಷಾದಿಸುತ್ತೇನೆ. ನಾನು ಈ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಗಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ಪ್ರಸ್ತುತ ಘಟನೆಯ ಸಂದರ್ಭದಲ್ಲಿ ಇದು ಸಂವೇದನಾರಹಿತವಾಗಿತ್ತು. ವೈದ್ಯನಾಗಿ ಎಲ್ಲ ಜೀವಗಳು ಮುಖ್ಯವೆಂದು ಹೇಳುತ್ತೇನೆ ಎಂದು ಡಾ.ಸುನೀಲ್ ಕ್ಷಮೆ ಯಾಚಿಸಿದ್ದರು. ಅಲ್ಲದೆ ನಾನು ಕಳೆದ ಹತ್ತು ವರ್ಷಗಳಿಂದ ಇಲ್ಲಿದ್ದು, ಈ ದೇಶ, ದೇಶದ ಜನರು ಮತ್ತು ಧರ್ಮವನ್ನು ಗೌರವಿಸುತ್ತೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

Advertisement

ಆದರೆ ಸಮಾಜಕ್ಕೆ ಅಹಿತವಾದ ಸ್ಟೇಟಸ್ ಹಾಕಿರುವುದರಿಂದ ತಕ್ಷಣವೇ ಜಾರಿಗೆ ಬರುವಂತೆ ಅವರನ್ನು ಉದ್ಯೋಗದಿಂದ ವಜಾಗೊ ಳಿಸಲಾಗಿದೆ ಎಂದು ದ ರಾಯಲ್ ಬಹರೈನ್ ಆಸ್ಪತ್ರೆ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement