ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಮಾರ್ಗ ದಿನದ 24 ಗಂಟೆ ವಾಹನ ಸಂಚಾರ ಪುನಾರಂಭ

ಮಂಗಳೂರು: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಸಮೀಪದ ಶಿರಾಡಿ ಮಾರ್ಗ ನಡುವೆ ಭೂ ಕುಸಿತ ಸಂಭವಿಸಿದ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ದಿನದ 24 ಗಂಟೆ ವಾಹನಗಳ ಸಂಚಾರಕ್ಕೆ ಅವಕಾಶ ಆರಂಭಿಸಲಾಗಿದೆ. ಶನಿವಾರ ರಾತ್ರಿಯೇ ಕೆಲವು ವಾಹನಗಳಿಗೆ ಈ ಮಾರ್ಗದಲ್ಲಿ ಸಂಚರಿಸಲು ಅವಕಾಶ ಒದಗಿಸಲಾಗಿದ್ದು, ರವಿವಾರ ರಾತ್ರಿಯಿಂದ ಪೂರ್ಣ ಪ್ರಮಾಣದಲ್ಲಿ ಅವಕಾಶ ಒದಗಿಸಲಾಗುತ್ತಿದೆ ಎನ್ನುವ ಮಾಹಿತಿಯನ್ನು ಉನ್ನತ ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೆ ಈ ಕುರಿತು ಹಾಸನ ಜಿಲ್ಲಾಧಿಕಾರಿಯಿಂದ ರವಿವಾರ ಸಂಜೆಯ ತನಕ ಅಧಿಕೃತ ಆದೇಶ ಹೊರಬಿದ್ದಿಲ್ಲ. ಭೂ ಕುಸಿತ ಸಂಭವಿಸಿದ ಬಳಿಕ ಈ ಮಾರ್ಗ ಶಿರಾಡಿ ಘಾಟಿ ಪ್ರದೇಶದಲ್ಲಿ ಬೆಳಗ್ಗೆ 6ರಿಂದ ರಾತ್ರಿ 6 ತನಕ ಮಾತ್ರ ವಾಹನಗಳ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ಮಂಗಳೂರು ನಿಲ್ದಾಣದಿಂದ ಹೊರಟ ಬಸ್‌ಗಳು ಗುಂಡ್ಯ ಭಾಗದಲ್ಲಿ ಹಾಗೂ ಬೆಂಗಳೂರಿನಿಂದ ರಾತ್ರಿ ಹೊರಟ ಬಸ್ ಸಕಲೇಶಪುರದಲ್ಲಿ ಸುಮಾರು 2:30 ಗಂಟೆ ಕಾಯುವ ಪರಿಸ್ಥಿತಿ ಇತ್ತು. ಈ ಸಮಸ್ಯೆ ಸದ್ಯ ನಿವಾರಣೆಯಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement