ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ಒಟ್ಟು 44 ಕೋಟಿ ರೂ. ದಂಡ!

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನೀಡಿದ್ದು ಇಂದು ಜೈಲು ಶಿಕ್ಷೆ ಪ್ರಕಟಿಸಿದೆ. ಅದರಂತೆ ಸೈಲು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಿದೆ.

ಮುಟ್ಟುಗೋಲು ಹಾಕಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement