ಮಂಗಳೂರಿನಲ್ಲಿ ಭಯಾನಕ ಗ್ಯಾಂಗ್ ರೇಪ್: ಅನ್ಯಕೋಮಿನ ಮೂವರು ಯುವಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!

ಮಂಗಳೂರು: ಕಲ್ಕತ್ತಾ ವೈದ್ಯೆಯ ಅತ್ಯಾಚಾರ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಬೆಚ್ಚಿಬೀಳಿಸಿದೆ.  ಜೇನು ಕೃಷಿ ಕೆಲಸ ಮಾಡಿಕೊಂಡು ಜೀವನ ನೆಡೆಸುತ್ತಿದ್ದ 21ವರ್ಷದ ಯುವತಿಯ ಸ್ನೇಹ ಬೆಳಿಸಿದ ಅಲ್ತಾಫ್ ಎಂಬ ತನ್ನ ಸ್ನೇಹಿತರ ಜೊತೆಗೆ ಸೇರಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಘಟನೆ ದ.ಕ ಜಿಲ್ಲೆಯ ಉಡುಪಿ ತಾಲೂಕಿನ ಕಾರ್ಕಳ ಎಂಬಲ್ಲಿ ನಡೆದಿದೆ.

ಅನ್ಯಕೋಮಿನ ಯುವಕರಿಂದ ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ನಡೆದಿದ್ದು ಈ ಘಟನೆ ಸಮಾಜದಲ್ಲಿ ಆತಂಕಕ್ಕೆ ಕಾರಣ ಆಗಿದೆ. ಕಾರ್ಕಳ ಅಯ್ಯಪ್ಪ ನಗರ ಬಳಿ ಕಾಡಿನಲ್ಲಿ ಯುವತಿಗೆ ಮತ್ತು ಬರುವ ವಸ್ತು ನೀಡಿ ಗ್ಯಾಂಗ್ ರೇಪ್ ಮಾಡಲಾಗಿದ್ದು ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

 

Advertisement

ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಯುವತಿ ಪ್ರಜ್ಞಾ ಹೀನ ಸ್ಥಿತಿ ಯಲ್ಲಿ ಇದ್ದು 4 ಮಂದಿ ಈ ಕೃತ್ಯದಲ್ಲಿ ತೊಡಗಿದ್ದು ಇದರಲ್ಲಿ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಕಿ ಗ್ಯಾಂಗ್ ರೇಪ್ ಮಾಡಿದವರ ಬಗ್ಗೆ ಮಾಹಿತಿ ಲಭ್ಯ ಆಗಬೇಕಿದೆ.

 

ಅನ್ಯಮತೀಯ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ. ಹಿಂದೂ ಸಂಘಟನೆಗಳು ಈಕೃತ್ಯದ ಬಗ್ಗೆ ಆಕ್ರೋಶವನ್ನು ಹೊರಹಾಕಿದ್ದು ನಾಳೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement