ಮಡಿಕೇರಿ : ಕಾಡಿಗಟ್ಟುವ ಸಂದರ್ಭ ಕಾಡಾನೆ ದಾಳಿಯಿಂದ ಅರಣ್ಯ ಇಲಾಖಾ ಸಿಬ್ಬಂದಿ ಮೃತ್ಯು..!

ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ಸಂಭವಿಸಿದೆ.

ಮಡಿಕೇರಿ : ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ಸಂಭವಿಸಿದೆ.

ಶುಂಠಿಕೊಪ್ಪದಲ್ಲಿ ಬೆಳಗ್ಗೆ ಕಾಡಾನೆ ದಾಳಿ ನಡೆಸಿ ಕಾರಣ ಬೈಕ್ ನಿಂದು ಬಿದ್ದು ವ್ಯಕ್ತಿಯೊಬ್ಬರಿಗೆ ಗಾಯವಾಗಿತ್ತು.

Advertisement

ಇವರನ್ನು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಅದೇ ಕಾಡಾನೆಯೂ ಮತ್ತೊಬ್ಬನ ಮೇಲೆಯೂ ಎರಗಿತ್ತು .

ಈ ಹಿನ್ನೆಲೆಯಲ್ಲಿ ಆನೆಯನ್ನು ಓಡಿಸುವ ಸಲುವಾಗಿ ಬೆಳಗ್ಗಿನಿಂದಲೇ ಅರಣ್ಯ ಇಲಾಖೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಈ ತಂಡದಲ್ಲಿ ಅರಣ್ಯ ಇಲಾಖೆ ಸಿಬಂದಿ ಗಿರೀಶ್ (35) ಕೂಡ ಇದ್ದರು. ಕಾಡಿಗಟ್ಟುವ ಸಂದರ್ಭದಲ್ಲಿ ಕಾಡಾನೆ ತಿರುಗಿ ಬಿದ್ದು ಗಿರೀಶ್ ಅವರನ್ನೇ ಬೆನ್ನಟ್ಟಿ ಮೇಲೆ ಎರಗಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement