ಮದ್ಯದ ಅಮಲು, ಓವರ್ ಸ್ಪೀಡ್: ಬಿಎಂಡಬ್ಲ್ಯು ಬೈಕ್ ಕಂಬಕ್ಕೆ ಡಿಕ್ಕಿ – ಯುವಕರಿಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಬಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು 31 ವರ್ಷದ ಮನಮೋಹನ್‌ ಹಾಗೂ 25 ವರ್ಷದ ನಿಖಿಲ್‌ ಎಂದು ಗುರುತಿಸಲಾಗಿದೆ.

ಯಶವಂತಪುರದಿಂದ ಆರ್‌ಎಮ್‌ಸಿ ಯಾರ್ಡ್ ರೋಡ್ ಕಡೆ ಡ್ರೈವ್ ಮಾಡುತ್ತಿದ್ದ ಇವರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಚಾಲನೆ ಮಾಡಿದ್ದರು ಎನ್ನಲಾಗಿದೆ. ಇಬ್ಬರೂ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ಮನಮೋಹನ್, ನಿಖಿಲ್ ವಾಪಸ್ ಬರುತ್ತಿದ್ದರು.

Advertisement

ಓವರ್‌ ಸ್ಪೀಡ್‌ನಿಂದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement