ಮದ್ಯ ಕುಡಿಯಲು ಹಣ ನೀಡದ್ದಕ್ಕೆ ತಾಯಿಯನ್ನೇ ಕೊಂದ ಮಗ.!

ಚಿಕ್ಕಮಗಳೂರು: ಮದ್ಯ ಕುಡಿಯಲು ಹಣ ನೀಡದಿದ್ದಕ್ಕೆ ಮಗನೋರ್ವ ತನ್ನ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ನಡೆದಿದೆ. ಕೆ.ಬಿದರೆ ಗ್ರಾಮದ ಸಂತೋಷ್ ಕೊಲೆ ಮಾಡಿದ ಆರೋಪಿಯಾಗಿದ್ದು, ಕಮಲಮ್ಮ (56) ಮೃತ ದುರ್ದೈವಿ. ಶನಿವಾರ ತಡರಾತ್ರಿ ಮದ್ಯದ ಅಮಲಿನಲ್ಲಿದ್ದ ಸಂತೋಷ್ ಮನೆಯಲ್ಲಿ ತಾಯಿ ಜತೆ ಜಗಳವಾಡಿದ್ದು, ಕುಪಿತಗೊಂಡು ತಾಯಿ ಕಮಲಮ್ಮಳ ಅವರ ಬಲಗೈಯನ್ನು ಬ್ಲೇಡ್‌ನಿಂದ ಕೊಯ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಅಸ್ಪಸ್ಥಗೊಂಡರು. ಕೂಡಲೇ ನೆರೆಹೊರೆಯವರು ಆಂಬ್ಯುಲೆನ್ಸ್‌ನಲ್ಲಿ ಸಿಂಗಟಗೆರೆ ಪ್ರಾಥಮಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಸಂತೋಷ್‌ನನ್ನು ಪಂಚನಹಳ್ಳಿ ಠಾಣೆ ಪಿಎಸ್‌ಐ ಬಂಧಿಸಿದ್ದಾರೆ. ಆರೋಪಿ ಅವಿವಾಹಿತನಾಗಿದ್ದು, ಈ ಹಿಂದೆ ಬೈಕ್ ಕಳವು ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಇನ್ನು ಗ್ರಾಮಕ್ಕೆ ಎಸ್ಪಿ ಡಾ. ವಿಕ್ರಮ ಅಮಟೆ ಹಾಗೂ ಡಿವೈಎಸ್ಪಿ ಹಾಲಮೂರ್ತಿರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement