ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 

ಹೊಸಪೇಟೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ವಿವಿಧ ಯೋಜನೆಗಳಡಿ ಪರಿಶಿಷ್ಟ ಪಂಗಡದ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ನೇರಸಾಲ ಯೋಜನೆಯಡಿ ಘಟಕವೆಚ್ಚ ರೂ.1 ಲಕ್ಷಗಳು ಇದರಲ್ಲಿ ಶೇ.50 ನಿಗಮದಿಂದ ಸಾಲ & 50% ಸಹಾಯಧನ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಇತರೆ ಚಟುವಟಿಕೆಗಳಿಗಾಗಿ ಗರಿಷ್ಠ ರೂ.1 ಲಕ್ಷ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್‌ನಿAದ ಸಾಲ.  ಮಹಿಳೆಯರಿಗಾಗಿ ಇತರೆ ಚಟುವಟಿಕೆಗಳಿಗಾಗಿ ಗರಿಷ್ಠ ರೂ.2 ಲಕ್ಷ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್‌ನಿAದ ಸಾಲ. ಸ್ವಾವಲಂಭಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿಗಾಗಿ ಗರಿಷ್ಠ ರೂ. 4 ಲಕ್ಷ ಮತ್ತು ಉಳಿದ ಮೊತ್ತ ಬ್ಯಾಂಕ್‌ನಿAದ ಸಾಲ. ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಕನಿಷ್ಠ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ಗರಿಷ್ಟ ರೂ. 2.50ಲಕ್ಷಗಳು, ಇದರಲ್ಲಿ ರೂ. 1.50 ಲಕ್ಷ ಸಹಾಯಧನ ಮತ್ತು ರೂ. 1 ಲಕ್ಷ ನಿಗಮದಿಂದ ಸಾಲ. ಭೂ ಒಡೆತನ ಯೋಜನೆ ಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಠ 0.20 ಎಕರೆ ಮೇಲ್ಪಟ್ಟು ಘಟಕವೆಚ್ಚದಲ್ಲಿ ಗರಿಷ್ಠ ಎಷ್ಟು ವಿಸ್ತೀರ್ಣ ಬರುತ್ತದೆಯೋ ಅಷ್ಟು ಜಮೀನನ್ನು ಖರೀದಿಸಿ ಕೊಡಲಾಗುವುದು. ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಖುಷ್ಕಿ ಅಥವಾ ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.

Advertisement

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.29 ಕೊನೆಯ ದಿನವಾಗಿದ್ದು, ಅರ್ಹರು  ಬೆಂಗಳೂರು ಓನ್, ಕರ್ನಾಟಕ ಓನ್, ಗ್ರಾಮ ಓನ್ ಸೆಂಟರ್‌ಗಳ ಮುಖಾಂತರ ಸೇವಾಸಿಂಧು ವೆಬ್‌ಸೈಟ್ https://sevasindhuservices.karnataka.gov.in ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ (ನಿ), ಕೊಠಡಿ ಸಂಖ್ಯೆ: 05, ಮೊದಲನೇ ಮಹಡಿ, ತಾಲ್ಲೂಕು ಕಚೇರಿ ಕಟ್ಟಡ, ಹೊಸಪೇಟೆ, ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement