ಮಹಿಷಾ ದಸರಾ: ಚಿಕ್ಕಮಂಗಳೂರಿನಲ್ಲಿ 6 ದಿನ 144 ಸೆಕ್ಷನ್ ಜಾರಿ

ಚಿಕ್ಕಮಗಳೂರು: ಚಿಕ್ಕಮಂಗಳೂರಿನಲ್ಲಿ ಮಹಿಷಾ ದಸರಾ ಆಚರಣೆ ವಿಚಾರವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಮಹಿಷಾ ದಸರಾ ಆಚರಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಹಯೋಗದೊಂದಿಗೆ ಮಹಿಷ ದಸರಾ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವ ಪ್ರೊ. ಕೆಎಸ್ ಭಗವಾನ್ ಆಗಮಿಸಲಿದ್ದರು.

ಆದರೆ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಪ್ರೊ. ಕೆಎಸ್ ಭಗವಾನ್ ಆಗಮನಕ್ಕೆ ಜಿಲ್ಲೆಯಯಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಮುಂಜಾಗ್ರತಾ ಅಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜರಿಂದ ಆದೇಶ ಹೊರಡಿಸಲಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement