ಮಾಜಿ ಸಚಿವ ಸುಶೀಲ್ ಕುಮಾರ್‌ ಶಿಂಧೆ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ

ಸೊಲ್ಲಾಪುರ :ಮಹಾರಾಷ್ಟ್ರದ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು , 2024 ರ ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ.

ತಮ್ಮ ರಾಜಕೀಯ ಜೀವನ ಅಂತ್ಯಗೊಂಡ ಬಳಿಕ ಮಗಳು ಪ್ರಣಿತಿ ಶಿಂಧೆ ಸೊಲ್ಲಾಪುರ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದರು.

Advertisement

ಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾಗಿದ್ದು, ಮನಮೋಹನ್ ಸಿಂಗ್ ಸರ್ಕಾರ ಇರುವ ಸಂದರ್ಭದಲ್ಲಿ ಇಂಧನ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಶಿಂಧೆ ಅವರ ಮಗಳಾದ ಪರಿಣಿತಿ ಶಿಂಧೆ ಸೊಲ್ಲಾಪುರದಿಂದ ಮೂರು ಬಾರಿ ಶಾಸಕಿಯಾಗಿದ್ದಾರೆ. ಅದೇ ರೀತಿ ಶಿಂಧೆ ಅವರು ಸೊಲ್ಲಾಪುರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement