ಮುಡಾ ಹಗರಣ ಒಪ್ಪಿಕೊಂಡ ಸರಕಾರ – ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ

ಬೆಂಗಳೂರು/ಮೈಸೂರು: ಕಾಂಗ್ರೆಸ್ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುವ ಮುಡಾ ಹಗರಣವನ್ನು ಬಯಲಿಗೆ ತಂದಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಎದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಗಂಗರಾಜು ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ . ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ.

ಈ ಮಧ್ಯೆ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರವೇ ಹೊರಡಿಸಿರುವ ಆದೇಶ ಈಗ ಸಿಎಂಗೆ ತಲೆನೋವಾಗುವ ಸಾಧ್ಯತೆಗಳಿವೆ. ಆರಂಭದಿಂದಲೂ 50:50 ರ ಅನುಪಾತದಲ್ಲಿ ಸೈಟ್ ಹಂಚಿಕೆ ಆಗಿದೆ ಎಂಬ ಆರೋಪವನ್ನು ವಿಪಕ್ಷ ಬಿಜೆಪಿ ಮಾಡುತ್ತಲೇ ಬಂದಿತ್ತು. ಆದರೆ ನಿನ್ನೆ(ಸೆ.02) ಹೊರಡಿಸಲ್ಪಟ್ಟಿರುವ ಅಮಾನತು ಆದೇಶದಲ್ಲಿ 50:50 ಅನುಪಾತದಲ್ಲಿ ನಿಯಮ ಬಾಹಿರವಾಗಿ ನಡೆದುಕೊಂಡಿರುವ ಕಾರಣವನ್ನು ಕೊಡಲಾಗಿದೆ. ಇದರಿಂದಾಗಿ ಬಿಜೆಪಿ ಮತ್ತು ದೂರುದಾರರ ಆರೋಪವನ್ನು ರಾಜ್ಯ ಸರ್ಕಾರವೇ ಒಪ್ಪಿಕೊಂಡಂತಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement