ಮುಡಾ ಹಗರಣ ಸಿದ್ದರಾಮಯ್ಯ ಜೈಲಿಗೆ ಹೊಗುತ್ತಾರೆ.! ಭವಿಷ್ಯ ನುಡಿದ ಜಗದೀಶ್ ಶೆಟ್ಟರ್.!

ಬೆಳಗಾವಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಸ್ಪೋಟಕ ಭವಿಷ್ಯ ಹೇಳಿದ್ದಾರೆ.!

ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಕಚೇರಿ ಉದ್ಘಾಟಿಸಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಎಲ್ಲ ದಾಖಲೆಗಳನ್ನು ನೋಡಿದ್ದೇನೆ. ಇದರಲ್ಲಿ ನಿಯಮ ಉಲ್ಲಂಘಿಸಿರುವುದು ಮತ್ತು ಸಿದ್ದರಾಮಯ್ಯನವರೇ ಅಕ್ರಮದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟ. ನಾನು ಒಬ್ಬ ವಕೀಲನಾಗಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಅವರಿಗೆ ಶಿಕ್ಷೆಯಾಗಲಿದೆ ಎಂದು ಭವಿಷ್ಯ ನುಡಿದರು.

ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದಕ್ಕೆ ಬಹಳಷ್ಟು ಖುಷಿ ಪಡೋರು ಕಾಂಗ್ರೆಸ್ ನಾಯಕರೇ ಹೆಚ್ಚು. ನಾವು ಸಿದ್ದರಾಮಯ್ಯ ಹಿಂದೆ ಇದ್ದೇವೆ, ಅವರ ಹೋರಾಟಕ್ಕೆ ಬೆಂಬಲಿಸುತ್ತೇವೆ ಎನ್ನುವವರು, ಒಳಗೊಳಗೆ ಖುಷಿ ಪಡೋರು ಕಾಂಗ್ರೆಸ್ ನಾಯಕರು. ಅದರ ಪರಿಣಾಮ ಸ್ವಲ್ಪದರಲ್ಲೇ ಗೊತ್ತಾಗುತ್ತದೆ.ಅಕ್ಕಪಕ್ಕದವರೇ ದಾಖಲೆ ಬಿಡುಗಡೆ ಮಾಡಿದ್ದರೆಂದು ನಾನು ಯಾಕೆ ಹೇಳಲಿ? ಅದು ಈಗ ಹೊರಗಡೆಗೆ ಬಂದಿದೆ, ಖುಷಿ ಪಡೋರು ಜಾಸ್ತಿ ಇದ್ದಾರೆ ಎಂದರು.

Advertisement

ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯರು ತಕ್ಷಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಿತ್ತು. ಈವರೆಗೆ ರಾಜೀನಾಮೆ ನೀಡುತ್ತಿಲ್ಲ. ಸಿಎಂ ಹುದ್ದೆಯಲ್ಲಿ ಇರಲು ಸಿದ್ದರಾಮಯ್ಯ ಅವರು ಅನರ್ಹ. ರಾಜ್ಯಪಾಲರ ನಿರ್ಧಾರಗಳು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್​ನಲ್ಲಿ ಅಂಗೀಕಾರವಾಗಿವೆ ಎಂದು ಶೆಟ್ಟರ್ ಸಮರ್ಥಿಸಿಕೊಂಡರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement