‘ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ’- ಅನಂತಕುಮಾರ ಹೆಗಡೆ ವಿರುದ್ಧ ಸಿಎಂ ಕಿಡಿ

ಬೆಳಗಾವಿ ಜಿಲ್ಲೆ: ಮನುಷ್ಯ ದ್ವೇಷ ಹರಡಿ, ಮಸೀದಿ ಧ್ವಂಸ ಮಾಡಲು ಕರೆಕೊಟ್ಟ ಮೂರ್ಖರು ಈಗಲೂ ಇದ್ದಾರೆ. ಆ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ. ರಾಯಣ್ಣನ ತ್ಯಾಗ ಬಲಿದಾನಕ್ಕೆ ಚಪ್ಪಾಳೆ ತಟ್ಟೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಮಸೀದಿಗಳನ್ನು ಧ್ವಂಸ ಮಾಡುವ ಬಗ್ಗೆ ಇದನ್ನೆಲ್ಲ ಇತಿಹಾಸ ಹೇಳುತ್ತದೆಯೇ? ಇಂಥ ಮೂರ್ಖರು ದಾರಿ ತಪ್ಪಿಸುತ್ತಾರೆ. ಇಂಥವರಿಗೆ ಕೆಲವರು ಚಪ್ಪಾಳೆ ತಟ್ಟುತ್ತಾರೆ. ದಯಮಾಡಿ ಸಂಗೊಳ್ಳಿ ರಾಯಣ್ಣಅಂತಹವರಿಗೆ ಮಾತ್ರ ಚಪ್ಪಾಳೆ ತಟ್ಟಬೇಕು. ದಾರಿ ತಪ್ಪಿಸುವ ಮೂರ್ಖರಿಗೆ ಚಪ್ಪಾಳೆ ತಟ್ಟಬಾರದು ಎಂದು ಕಿಡಿಕಾರಿದರು.

ಭಾರತ ದೇಶದವರು ಪರಸ್ಪರ ದ್ವೇ ಷ ಮಾಡಬಾರದು. ಪರಸ್ಪರ ಪ್ರೀತಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪರಸ್ಪರ ಪ್ರೀತಿ, ಸೌಹಾರ್ದತೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement