ಮೋದಿ ಇರುವವರೆಗೂ ಸನಾತನ ಧರ್ಮದ ನಾಶ ಅಸಾಧ್ಯ-ನರೇಂದ್ರ ಮೋದಿ

ಮೈಸೂರು: ಎಲ್ಲಿಯವರೆಗೆ ಮೋದಿ ಇರುತ್ತಾರೋ ಅಲ್ಲಿಯವರೆಗೆ ಹಿಂದೂ ಧರ್ಮ ಹಾಗೂ ಸನಾತನ ಧರ್ಮದ ನಾಶ ಅಸಾಧ್ಯ. ಇದು ಕೂಡ ಮೋದಿ ಗ್ಯಾರಂಟಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮೈಸೂರು ನಗರದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆಲ್ಲಾ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಹೇಳಿದರು. ಮೈಸೂರು ಸಾಂಸ್ಕೃತಿಕ ರಾಜಧಾನಿ. ಇಲ್ಲಿನ ದಸರಾ ಇಡೀ ದೇಶಕ್ಕೆ ಪ್ರಖ್ಯಾತಿ. ತಾಯಿ ಚಾಮುಂಡಿ, ತಾಯಿ ಭುವನೇಶ್ವರಿ, ತಾಯಿ ಕಾವೇರಿ ಪಾದಕ್ಕೆ ನನ್ನ ಪ್ರಣಾಮಗಳು. ಸಂಸದೀಯ ಕ್ಷೇತ್ರದಲ್ಲಿ ದೇವೇಗೌಡರದ್ದು ಬಹಳ ದೊಡ್ಡ ಹೆಸರು. ಅವರಿಗೆ ನನ್ನ ನಮನಗಳು ಎಂದು ಪ್ರಧಾನಿ ಮಾತು ಆರಂಭಿಸಿದರು. ಬಿಜೆಪಿ ಸಂಕಲ್ಪ ಪತ್ರ ಮೋದಿ ಕೀ ಗ್ಯಾರಂಟಿಯಾಗಿದೆ. ಬಡವರಿಗೆ 3 ಕೋಟಿ ಮನೆ ನಿರ್ಮಾಣ ಮಾಡುತ್ತೇವೆ. ಉಚಿತ ಪಡಿತರ ವಿತರಣೆ ಮಾಡುತ್ತೇವೆ. ಆಯುಷ್ಮಾನ್ ಭಾರತ್ ಅಡಿ ಹಿರಿಯರಿಗೆ ಉಚಿತ ವೈದ್ಯಕೀಯ ಸೇವೆ ಎಂದು ಹೇಳುವ ಮೂಲಕ ಪ್ರಧಾನಿಯವರು ಬಿಜೆಪಿ ಸಂಕಲ್ಪ ಪತ್ರದ (BJP Manifesto) ಬಗ್ಗೆ ವಿವರಣೆ ನೀಡಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement