ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ – ಅಣ್ಣಾಮಲೈಗೆ ಒಲಿದು ಬಂದ ಸಚಿವ ಸ್ಥಾನ

ನವದೆಹಲಿ : ಮೋದಿ ಮೂರನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಲು ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ ಮೂರನೇಯ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಇನ್ನು, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೂ ಸಚಿವ ಸ್ಥಾನ ಒಲಿದು ಬಂದಿದೆ. ಹೌದು, ಈ ಕುರಿತು ಪ್ರಧಾನಿ ಕಾರ್ಯಾಲಯದಿಂದ ಕರೆ ಮಾಡಿ ಸಚಿವ ಸ್ಥಾನದ ನೀಡೋದಾಗಿ ಹೇಳಲಾಗಿದೆ. ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಶತಾಗತಾಯ ಬೆಳೆಸಲು ಅಣ್ಣಾಮಲೈ ಭಾರಿ ಶ್ರಮ ಪಟ್ಟಿದ್ದಾರೆ. ಈ ಬಾರಿ 1-3 ಸ್ಥಾನಗಳು ಬಿಜೆಪಿ ತಮಿಳುನಾಡಿನಲ್ಲಿ ಸಿಗಲಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಿಜೆಪಿ ನಿರೀಕ್ಷೆ ಸುಳ್ಳಾಗಿದೆ. ಆದರೂ ಕೂಡಾ ಅಣ್ಣಾಮಲೈ ಶ್ರಮವನ್ನು ಮೆಚ್ಚಿ ಕೇಂದ್ರ ಮಂತ್ರಿ ಸ್ಥಾನ ನೀಡಲು ಎನ್‌ಡಿಎ ಮೈತ್ರಿಕೂಟ ಮುಂದಾಗಿದೆ. ಈ ಕುರಿತು ಅಣ್ಣಾಮಲೈ ಅವರಿಗೆ ನವದೆಹಲಿ ಪ್ರಧಾನಿ ಕಾರ್ಯಾಲಯದಿಂದ ಕರೆ ಮಾಡಿ ತಿಳಿಸಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement