ರವೀಂದರ್ ನನಗೆ ಮೋಸ ಮಾಡಿ ಮದುವೆಯಾಗಿದ್ದಾನೆ..! -ಮಹಾಲಕ್ಷ್ಮೀ

ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮತ್ತು ನಟಿ ಮಹಾಲಕ್ಷ್ಮೀ ಶಂಕರ್ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಬ್ಬರಿಗೆ ಇದು ಎರಡನೇ ಮದುವೆಯಾಗಿತ್ತು. ತನಗಿಂತ ಎತ್ತರವಾದ ಮಗನಿದ್ದರೂ ನಟಿ ಮಹಾಲಕ್ಷ್ಮೀ ದಡೂತಿ ದೇಹವನ್ನು ಹೊಂದಿರುವ ನಿರ್ಮಾಪಕ ರವೀಂದರ್ ಅವರನ್ನು ಪ್ರೀತಿಸಿ ಮದುವೆಯಾದರು. ಇವರಿಬ್ಬರ ಮದುವೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಇವರಿಬ್ಬರ ಜೋಡಿ ನೋಡಿದವರು ಈಕೆ ಹಣದ ಆಸೆಗೆ ರವೀಂದರ್ ಅವರನ್ನು ಮದುವೆಯಾಗಿರುವುದು. ಹೆಚ್ಚೇನು ಈ ಜೋಡಿ ಒಟ್ಟಿಗೆ ಸಂಸಾರ ಮಾಡಲ್ಲ ಎಂದು ಟ್ರೋಲ್ ಮಾಡಲಾಗಿತ್ತು. ಇದಕ್ಕೆಲ್ಲ ಕ್ಯಾರೇ ಅನ್ನದೆ ಈ ಜೋಡಿ ಒಟ್ಟಿಗೆ ಸುತ್ತಾಡುತ್ತಿರುವ ಹಾಗೂ ರೋಮ್ಯಾಂಟಿಕ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು.

ಇದೀಗ ರವೀಂದರ್ ಅವರು ವಂಚನೆ ಪ್ರಕರಣ ಸಂಬಂಧ ಜೈಲು ಸೇರುತ್ತಿದ್ದ ಹಾಗೇ ಮಹಾಲಕ್ಷ್ಮೀ ತಮ್ಮ ವರಸೆ ಬದಲಿಸಿಕೊಂಡಿದ್ದಾರೆ. ನಾನು ರವೀಂದರ್‌ನಿಂದ ಮೋಸ ಹೋದೆ. ಇದೆಲ್ಲ ನನಗೆ ಗೊತ್ತಿರಲಿಲ್ಲ ಎಂದು ತಮ್ಮ ಆಪ್ತ ವಲಯಗಳಲ್ಲಿ ಹೇಳಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

Advertisement

ಮಹಾಲಕ್ಷ್ಮೀ ಹೇಳಿಕೆ ಹೀಗಿದೆ:

“ಮದುವೆಗೂ ಮುನ್ನವೇ ನನಗೆ ಇದ್ಯಾವುದೂ ಗೊತ್ತಿರಲಿಲ್ಲ. ಈ ವಿಚಾರಗಳನ್ನೂ ರವೀಂದರ್‌ ನನ್ನ ಮುಂದೆ ಹೇಳಿಕೊಂಡಿರಲಿಲ್ಲ. ನನ್ನನ್ನು ಮೋಸ ಮಾಡಿ ಮದುವೆಯಾಗಿದ್ದಾನೆ” ಎಂದು ಮಹಾಲಕ್ಷ್ಮೀ, ಪತಿ ರವೀಂದರ್‌ ಬಗ್ಗೆ ತಮ್ಮ ಆಪ್ತ ವಲಯದ ಮುಂದೆ ಹೇಳಿಕೊಂಡಿದ್ದಾರೆ.

ಏನಿದು ರವೀಂದರ್ ವಂಚನೆ ಪ್ರಕರಣ?

ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿದರೆ ದುಪ್ಪಟ್ಟು ಲಾಭ ಸಿಗುತ್ತದೆ ಎಂದು ಚೆನ್ನೈನ ಬಾಲಾಜಿ ಗಾಬಾ ತಮ್ಮ ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಎಂಬುವವರಿಗೆ ರವೀಂದರ್‌ ನಂಬಿಸಿದ್ದರು. ಅವರಿಂದ 16 ಕೋಟಿ ಹಣವನ್ನು ಹೂಡಿಕೆ ಸಹ ಮಾಡಿಸಿದ್ದರು. ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಹೇಳಿ ನಕಲಿ ದಾಖಲೆಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದರು ಎಂದು ಉದ್ಯಮಿ ಬಾಲಾಜಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ರವೀಂದರ್‌ ಅವರನ್ನು ಚೆನ್ನೈ ಪೊಲೀಸರು ಸೆ. 7ರಂದೇ ಬಂಧಿಸಿದ್ದರು.

ಪತಿ ರವೀಂದರ್‌ ಜೈಲು ಪಾಲಾಗಿದ್ದರೆ, ಇತ್ತ ಮಹಾಲಕ್ಷ್ಮೀ ಪತಿಗೆ ಜಾಮೀನು ಕೊಡಿಸುವ ಕಾರ್ಯದಲ್ಲಿ ನಿರತರಾಗಿದ್ದರೂ, ಅರ್ಜಿ ತಿರಸ್ಕೃತಗೊಂಡಿದೆ. ಮತ್ತೊಂದೆಡೆ ಪತಿ ಜೈಲು ಸೇರಿದ ಮೇಲಿಂದ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಸಹ ಹಂಚಿಕೊಳ್ಳದ ಮಹಾಲಕ್ಷ್ಮೀ ಕಳೆದ ನಾಲ್ಕೈದು ದಿನಗಳಿಂದ ಎಂದಿನಂತೆ, ನಿತ್ಯ ನಾಲ್ಕೈದು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದಲ್ಲದೆ ಮಾಧ್ಯಮಗಳ ಬಳಿ ತಮ್ಮ ಪತಿ ರವಿಂದರ್‌ ಬಂಧನದ ಬಗ್ಗೆ ಮೌನ ಮುರಿದಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement