ರಸ್ತೆ ಅಪಘಾತ – ಒಂದೇ ಕುಟುಂಬದ 7 ಮಂದಿ ಮೃತ್ಯು

ಹೊಸಪೇಟೆ: ಹೊಸಪೇಟೆಯ ಸುರಂಗ ಮಾರ್ಗದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಮಗು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ನಗರದ ಉಕ್ಕಡಕೇರಿ ನಿವಾಸಿಗಳಾದ ಗೋಣಿಬಸಪ್ಪ (65), ಬೀಮಲಿಂಗ (50), ಯುವರಾಜ (4) ಅನಿಲ್ (30), ಭಾಗ್ಯ (32) ಕೆಂಚವ್ವ (80) ಉಮಾ (45) ಎಂಬುವರರು ಅಪಘಾತದಲ್ಲಿ ಮೃತಪಟ್ಟವರು.

ಇನ್ನು ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ತೂಲಹಳ್ಳಿ ಗ್ರಾಮದ ಗೋಣಿ ಬಸವೇಶ್ವರ ದೇವಾಲಯಕ್ಕೆ ದರ್ಶನಕ್ಕಾಗಿ ಕ್ರೂಸರ್ ವಾಹನದಲ್ಲಿ ತೆರಲಿದ್ದು, ಮರಳಿ ಬರುವ ಸಂದರ್ಭದಲ್ಲಿ ಟಿಪ್ಪರ್ ಲಾರಿಯೊಂದು ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಆವಘಡ ಸಂಭವಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement