ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳಿಂದ 492 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಆ ಪೈಕಿ 13 ಕ್ಷೇತ್ರಗಳ ಪರಿಶೀಲನೆ ಕಾರ್ಯ ಶುಕ್ರವಾರ ಪೂರ್ಣಗೊಂಡಿದೆ.

ಅದರಂತೆ 276 ನಾಮಪತ್ರ ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ಪರಿಶೀಲನೆ ಕಾರ್ಯ ತಡರಾತ್ರಿವರೆಗೆ ನಡೆದಿದ್ದು, ಇನ್ನಷ್ಟೇ ವಿವರ ಲಭ್ಯವಾಗಬೇಕಿದೆ.

ಏ.8ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯದಿನವಾಗಿದ್ದು, ಆ ಬಳಿಕ ಚುನಾವಣಾ ಕಣದಲ್ಲಿ ಎಷ್ಟು ಮಂದಿ ಉಳಿಯುತ್ತಾರೆ ಎನ್ನುವುದು ಸ್ಪಷ್ಟವಾಗಲಿದೆ.

Advertisement

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು, 19 ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ 10 ನಾಮಪತ್ರಗಳು ಕ್ರಮಬದ್ಧವಾಗಿದೆ, 4 ತಿರಸ್ಕೃತಗೊಂಡಿವೆ. ದಕ್ಷಿಣ ಕನ್ನಡ ಕ್ಶೇತ್ರದಲ್ಲಿ 11 ಅಭ್ಯರ್ಥಿಗಳು 21 ನಾಮಪತ್ರ ಸಲ್ಲಿಸಿದ್ದು 10 ಕ್ರಮಬದ್ಧವಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement