ರೈತರು, ಸಾರ್ವಜನಿಕರಿಂದ ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ..!

WhatsApp
Telegram
Facebook
Twitter
LinkedIn

ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಆದರೆ ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ.

 

ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ರೆ ಸಿಎಂ ಜಿಲ್ಲೆಗೆ ಬಂದಾಗ ಕಪ್ಪುಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon