ಲಂಚ ಆರೋಪ: ಕೇರಳದಲ್ಲಿ ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳು ವಶಕ್ಕೆ

ತಿರುವನಂತಪುರ: ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಪೊಲೀಸ್ ನ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಲ್ಲಿಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ವೈಟ್ ಫೀಲ್ಡ್ ಪೊಲೀಸ್ ಅಧಿಕಾರಿಗಳು ಕೊಚ್ಚಿಯ ಕುಂಬಲಂಗಿಯಿಂದ ಇಬ್ಬರನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಈ ಇಬ್ಬರನ್ನು ಬಿಡುಗಡೆ ಮಾಡಲು 10 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಪಾವತಿಸಿದ ಹೊರತಾಗಿಯೂ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಚ್ಚಿ ನಗರದಲ್ಲಿ ಪೊಲೀಸರು ವಾಹನ ಹಾಗೂ ನಗದನ್ನು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ. ಬಂಧಿತ ಪೋಲೀಸರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement