ಲೋಕಸಭಾ ಚುನಾವಣೆಗೆ ಡಾ ಮಂಜುನಾಥ್ ಸ್ಪರ್ಧೆ ಖಚಿತ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ.

ಡಾ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈ ಹಿನ್ನೆಲೆ ಡಾ ಮಂಜುನಾಥ್ ಅವರು ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದು, ಈಗಾಗಲೇ ಚುನಾವಣಾ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ಇಂದು ಸಂಜೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.

ಮಾರ್ಚ್ 14ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಈ ಮೂಲಕ ತನ್ನ ರಾಜಕೀಯ ಜೀವನವನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಪ್ರಾರಂಭಿಸಲಿದ್ದಾರೆ.

Advertisement

ಇನ್ನು ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಇವರೆಲ್ಲರ ಸಮ್ಮುಖದಲ್ಲಿ ಡಾ ಮಂಜುನಾಥ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement