ವಚನ : —ಸಕಳೇಶ ಮಾದರಸ

 

 

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬೆಟ್ಟದ ಮೇಲಣ ಗಿಡಗಳು ಬೆಟ್ಟವ ಮುಟ್ಟಂತಿಪ್ಪವೆ ?

ವಿವರಿಸಿ ನೋಡಿದಡೆ,

ಸೃಷ್ಟಿಯೊಳಗಣ ಪ್ರಾಣಿಗಳು ಪರಮನ ಮುಟ್ಟದಿಪ್ಪವೆ ?

ಕಷ್ಟರು ಬೇಡವೆಂದು ಬಿಟ್ಟೋಡುತ್ತಿಪ್ಪ

ಪ್ರಾಣಿಗಳನಟ್ಟಿ, ಹಿಡಿದು ಕೊಂದಡೆ,

ಸೈಷ್ಟಿಗೀಶ್ವರನಿಕ್ಕದಿಪ್ಪನೆ ನರಕದಲ್ಲಿ ?

ಒಡೆಯರಿಲ್ಲೆಂದು ಹಲವು ಪ್ರಾಣಿಗಳ ಹರಿಹರಿದು ಕೊಂದಡೆ,

ಹರನಿಕ್ಕದಿಪ್ಪನೆ ಅಘೋರನರಕದಲ್ಲಿ ?

ಸಕಲಪ್ರಾಣಿಗಳಿಗೆ ಮೇಲಾರೈಕೆ,ನಮ್ಮ ಸಕಳೇಶ್ವರದೇವನಲ್ಲದೆ ಮತ್ತೊಬ್ಬರುಂಟೆ?

 

-ಸಕಳೇಶ ಮಾದರಸ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement