‘ವಿಧಾನಸೌಧದ 4 ಗೇಟ್ ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ’- ಗೃಹ ಸಚಿವ ಪರಮೇಶ್ವರ್

ಬೆಂಗಳೂರು: 2 ರಿಂದ 3 ಕೋಟಿ ರೂ. ಹಣ ಖರ್ಚು ಮಾಡಿ ವಿಧಾನಸೌಧದ 4 ಗೇಟ್ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗುತ್ತದೆ. ಜೊತೆಗೆ ವಿಧಾನ ಸೌಧಕ್ಕೆ ಬರುಬೇಕು ಅಂದರೆ ಇನ್ನು ಮುಂದೆ ಕ್ಯೂಆರ್​ ಕೋಡ್ ಇರುವ ಪಾಸ್​ಗಳನ್ನು ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್ ಗಳಿರಲಿಲ್ಲ. ಹಾಗಾಗಿ ಇಂದು ನಾಲ್ಕು ಗೇಟ್ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ. ವಿಧಾನ ಸೌಧದಲ್ಲಿ ಯಾರಾದರೂ ಲೋಹದ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್​​ನಲ್ಲಿ ಗೊತ್ತಾಗುತ್ತದೆ. ಮೂರು ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಕೆಟ್ಟಿದ್ದವು. ಈಗ ಸಿಎಂ ಸಿದ್ದರಾಮಯ್ಯ ಅವರು ಹಣ ಬೀಡುಗಡೆಗೊಳಿಸಿದ ಬಳಿಕ ಈ ಬ್ಯಾಗೇಜ್ ಸ್ಕ್ಯಾನರ್ ತೆಗೆದುಕೊಂಡು ಬಂದಿದ್ದೇವೆ ಎಂದು ಹೇಳಿದರು.

ವಿಧಾನ ಸೌಧದಲ್ಲಿ ಸೆಕ್ಯೂರಿಟಿ ಇನ್ನು ಹೆಚ್ಚು ಮಾಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಇನ್ನು ಮುಂದೆ ವಿಧಾನ ಸೌಧ ಪ್ರವೇಶ ಮಾಡಲು ಬೇಕಾಬಿಟ್ಟಿ ಪಾಸ್ ಗಳನ್ನು ನೀಡುವುದಿಲ್ಲ ಎಂದರು.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement