ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ – ಆರು ಮಂದಿ ಅಪ್ರಾಪ್ತರ ಬಂಧನ

ಕೋಲಾರ: ಟಿವಿ ವೀಕ್ಷಿಸುತ್ತಾ ಶಿಕ್ಷಕಿ ಕುಳಿತಿದ್ದಾಗ ಏಕಾಏಕಿ ಮನೆಯೊಳಗೆ ನುಗ್ಗಿ ಹಂತಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಮುಳಬಾಗಿಲು ಮೂಲದ ಆರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ (43) ಎಂಬುವವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು.ಈ ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು.

ಅದರಂತೆಯೇ ಇಂದು ತಿರುಪತಿಯಲ್ಲಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರು ಜನ ಹಂತಕರಲ್ಲಿ ಬಹುತೇಕ ಅಪ್ರಾಪ್ತರು ಎಂಬ ಮಾಹಿತಿ ದೊರಕಿದೆ. ಸದ್ಯ ವಿಚಾರಣೆ ವೇಳೆ ಜಮೀನು ವ್ಯಾಜ್ಯ, ದ್ವೇಷದಿಂದ ಶಿಕ್ಷಕಿ ದಿವ್ಯಶ್ರಿ ಕೊಲೆಗೆ ಸುಫಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಸುಫಾರಿ ನೀಡಿದ ಪ್ರಮುಖ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.

Advertisement

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement