ಶಿರೂರು ಗುಡ್ಡ ಕುಸಿತ; ಮೂರನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ಕಿತು ಮೂಳೆ..!

ಅಂಕೋಲಾ: ಶಿರೂರು ಗುಡ್ಡ ಕುಸಿತದ ಮೂರನೇ ಹಂತದ ಮೂರನೇ ದಿನದ ಶೋಧ ಕಾರ್ಯಾಚರಣೆ ವೇಳೆ ಮೂಳೆಯೊಂದು ಸಿಕ್ಕಿದೆ.

ಗಂಗಾವಳಿ ನದಿಯ ಆಳದಿಂದ ಮೇಲೆತ್ತಲಾದ ಮಣ್ಣು ರಾಶಿಯಲ್ಲಿ ಮೂಳೆಯ ತುಂಡೊಂದು ಪತ್ತೆಯಾಗಿದ್ದು, ಇದು ಜುಲೈ 16 ರಂದು ನಡೆದ ದುರ್ಘಟನೆಯಲ್ಲಿ ಕಣ್ಮರೆಯಾಗಿ ಇದುವರೆಗೂ ಪತ್ತೆಯಾಗದ ಮೂವರಲ್ಲಿ ಯಾರದಾದರೂ ಆಗಿರಬಹುದೇ ಎಂಬ ಜಿಜ್ಞಾಸೆ ಆರಂಭವಾಗಿದೆ. ಇದು ಮನುಷ್ಯರ ಮೂಳೆಯೇ ಅಥವಾ ಯಾವುದೋ ಪ್ರಾಣಿಯ ಮೂಳೆಯೇ ಎನ್ನುವ ಪ್ರಶ್ನೆಯೂ ಕಾಡಲಾರಂಭಿಸಿದ.

ಶಿರೂರು ದುರಂತದಲ್ಲಿ ಕಣ್ಮರೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ, ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಅವರ ಮೃತದೇಹಗಳು ಘಟನೆ ಸಂಭವಿಸಿ ಎರಡು ತಿಂಗಳು ಕಳೆದರೂ ಪತ್ತೆಯಾಗಿಲ್ಲ. ಕಣ್ಮರೆಯಾದವರ ಎಲುಬಿನ ತುಂಡಾದರೂ ಸಿಕ್ಕರೆ ಸಂಸ್ಕಾರ ಕಾರ್ಯ ನಡೆಸುವ ನಿರೀಕ್ಷೆಯಲ್ಲಿ ಅವರ ಕುಟುಂಬದವರಿದ್ದಾರೆ.

Advertisement

ಹೀಗಾಗಿ ಪ್ರತಿದಿನ ಶೋಧ ಕಾರ್ಯಾಚರಣೆ ಸ್ಥಳದಲ್ಲಿ ಕುಟುಂಬದವರು ಹಾಜರಿರುವುದು ಕಂಡುಬರುತ್ತಿದೆ. ವೈಜ್ಞಾನಿಕ ಪರೀಕ್ಷೆ ಬಳಿಕವೇ ಈ ಮೂಳೆಯ ಕುರಿತು ನಿಖರವಾದ ಮಾಹಿತಿ ಸಿಗಲಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement