ಸೇನಾ ಟ್ರಕ್ ಮೇಲೆ ಉಗ್ರರ ಹೊಂಚು ದಾಳಿ ,ಮೂವರು ಯೋಧರು ಹುತಾತ್ಮ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಥಾನಮಂಡಿ ಪ್ರದೇಶದಲ್ಲಿಎರಡು ಸೇನಾ ಟ್ರಕ್ ಮೇಲೆ ಭಯೋತ್ಪಾದಕರು ಹೊಂಚು ದಾಳಿ ನಡೆಸಿದ ಪರಿಣಾಮ, ಮೂವರು ಯೋಧರು ಹುತಾತ್ಮರಾಗಿದ್ದು, ಮೂವರಿಗೆ ಗಾಯಗಳಾಗಿದೆ.ತಕ್ಷಣವೇ ಸೇನೆ ಪ್ರತಿದಾಳಿ ನಡೆಸಿದೆ.

ಇದು ಒಂದು ತಿಂಗಳೊಳಗೆ ಈ ಪ್ರದೇಶದಲ್ಲಿ ಸೇನೆಯ ಮೇಲೆ ನಡೆದ ಎರಡನೇ ಭಯೋತ್ಪಾದಕ ದಾಳಿ ಇದಾಗಿದೆ.

ಠಾಣಮಂಡಿ-ಸುರನಕೋಟೆ ರಸ್ತೆಯ ಸಾವನಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ.

Advertisement

ಬುಧವಾರದಿಂದ ಭಯೋತ್ಪಾದಕರ ವಿರುದ್ಧ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿರುವ ಬಫ್ಲಿಯಾಜ್ ಪ್ರದೇಶದಿಂದ ಜವಾನರನ್ನು ಹೊತ್ತೊಯ್ಯುತ್ತಿರುವ ವೇಳೆ ಹೊಂಚು ಹಾಕಿದ್ದ ಉಗ್ರರು ಈ ದಾಳಿ ನಡೆಸಿದ್ದಾರೆ.

ಆ ಬಳಿಕ ಸೇನೆಯಿಂದ ಎನ್ಕೌಂಟರ್ ಕಾರ್ಯಾಚರಣೆ ಆರಂಭವಾಯಿತು. ಆದಾಗ್ಯೂ, ಸೇನೆಯು ಗುರುವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಗ್ರರರನ್ನು ಸೆದೆ ಬಡಿಯಲು ಕಾರ್ಯಾಚರಣೆ ನಡೆಸುತ್ತಿದೆ.

ಕಠಿಣ ಗುಪ್ತಚರ ಆಧಾರದ ಮೇಲೆ, ನಿನ್ನೆ ರಾತ್ರಿ ಡಿಕೆಜಿಯ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇಂದು ಸಂಜೆ ಸಂಪರ್ಕವನ್ನು ಸ್ಥಾಪಿಸಲಾಗಿದೆ ಮತ್ತು ಎನ್ಕೌಂಟರ್ ಪ್ರಗತಿಯಲ್ಲಿದೆ ಎಂದು ರಕ್ಷಣಾ ವಕ್ತಾರರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಯೂ ಇಲ್ಲಿ ನಡೆದಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement