ಹಿಮಪಾತದಲ್ಲಿ ಸಿಲುಕಿದ್ದ 80 ಮಂದಿಯನ್ನು ರಕ್ಷಿಸಿದ ಭಾರತೀಯ ಸೇನೆ

ಲೇಹ್ : ಹಿಮಪಾತದಲ್ಲಿ ಸಿಲುಕಿದ್ದ ಕನಿಷ್ಠ 80 ಮಂದಿಯನ್ನು ಭಾರತೀಯ ಸೇನೆ ಭಾನುವಾರ ರಕ್ಷಿಸಿದೆ. ಕೇಂದ್ರಾಡಳಿತ ಪ್ರದೇ ಲಡಾಖ್ ನ ಲೇಹ್ ಮತ್ತು ಶ್ಯೋಕ್ ನದಿ ಕಣಿವೆಯ ನಡುವಿನ 17,688 ಅಡಿ ಎತ್ತರದ ಚಾಂಗ್ ಲಾ ಪಾಸ್ ನಲ್ಲಿನ ಹಿಮಪಾತದಲ್ಲಿ ಇವರೆಲ್ಲೂ ಸಿಲುಕಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಸೇನೆಯ ಲೇಹ್ ಮೂಲದ 14 ಕಾರ್ಪ್ಸ್, ಚಾಂಗ್ ಲಾದ ಹಿಮಾವೃತ ಪ್ರದೇಶದಲ್ಲಿ ಭಾರೀ ಹಿಮಪಾತ ಸಂಭವಿಸಿತ್ತು. ವಿಷಯ ತಿಳಿದ ತ್ರಿಶೂಲ್ ವಿಭಾಗದ ಸೈನಿಕರು ಸ್ಥಳಕ್ಕೆ ಧಾವಿಸಿ, ತಡರಾತ್ರಿ 2 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಹಿಮದಲ್ಲಿ ಸಿಲುಕಿದ್ದ 80 ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬರೆದುಕೊಂಡಿದೆ. ಜೊತೆಗೆ ಕಾರ್ಯಾಚರಣೆ ನಡೆಸುತ್ತಿರುವ ಕೆಲ ಫೋಟೋಗಳು ಹಾಗೂ ವಿಡಿಯೋವನ್ನು ಹಂಚಿಕೊಂಡಿದೆ.

 

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement