ಹುಲಿ ಉಗುರು ಧರಿಸಿ ಪೋಟೋ ತೆಗೆಸಿಕೊಂಡವರ ಮನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ಎಂಟ್ರಿ…!

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವಾರು ಕನ್ನಡದ ನಟರಿಗೆ ಸಂಕಷ್ಟ ಉಂಟಾಗಿದ್ದು. ಹುಲಿ ಉಗುರು ಧರಿಸಿ ಪೋಟೋ ತೆಗೆಸಿಕೊಂಡಿದ್ದ ನಟ ದರ್ಶನ್‌ ತೂಗುದೀಪ ವಿರುದ್ದ ದೂರು ದಾಖಲಾಗಿದೆ. ಈ ಹಿನ್ನಲೆ ಅರಣ್ಯಾಧಿಕಾರಿಗಳು ಬೆಂಗಳೂರಿನ ಆರ್‌.ಆರ್. ನಗರದಲ್ಲಿರುವ ದರ್ಶನ್‌ ಮನೆಗೆ ದಾಳಿ ಮಾಡಿ ಪರಿಶೀಲನೆ ಮಾಡಲು ಮುಂದಾಗಿದ್ದಾರೆ.

ನಟನ ಮನೆಗೆ ಮೂವರು ಅಧಿಕಾರಿಗಳಿಂದ ಹುಲಿ ಉಗುರಿಗಾಗಿ ಭೇಟಿ ನೀಡಿದ್ದಾರೆ. ಸದ್ಯ ದರ್ಶನ್ ಮೈಸೂರಿನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ದರ್ಶನ್‌ಗೆ ಅರಣ್ಯಾಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ಇನ್ನು ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಬರುತ್ತಿದಂತೆ ಮನೆ ಮುಂದೆ ದರ್ಶನ್ ಕಾರು ಚಾಲಕ ಬಂದಿದ್ದಾನೆ. ಅವರ ಮುಂದೆಯೇ ಮನೆಯೊಳಗೆ ಹೋದ ಅರಣ್ಯಾಧಿಕಾರಿಗಳ ಎರಡು ತಂಡವು ಮನೆಯೊಳಗೆ ಶೋಧ ಕಾರ್ಯ ಮುಂದುವರೆಸಿದೆ. ನಂತರ, ಒಂದು ತಂಡವು ಹೊರ ಬಂದಿದ್ದು, ಇನ್ನೊಂದು ತಂಡವು ಮನೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ.

ಇನ್ನು ದರ್ಶನ್ ಮಾತ್ರವಲ್ಲದೇ ಈಗಾಗಲೇ ದೂರು ದಾಖಲಾದ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹುಲಿ ಉಗುರು ಧರಿಸಿದ್ದಾರೆನ್ನಲಾದ ಎಲ್ಲ ನಟರು, ನಾಯಕರ ಮನೆಗೂ ನೋಟಿಸ್‌ ನೀಡಲಾಗಿದೆ. ಈಗ ಎಲ್ಲಾ ಮನೆಗಳಿಗೂ ಅರಣ್ಯ ಇಲಾಖೆಯ ತಂಡವು ತೆರಳಿ ಹುಲಿ ಉಗುರು ಅಥವಾ ಇನ್ಯಾವುದೇ ಕಾಡು ಪ್ರಾಣಿಗಳ ಅಂಗಗಳ ಇರುವುದರ ಬಗ್ಗೆ ತಪಾಸಣೆ ಮಾಡಲು ತಂಡಗಳನ್ನ ಕಳುಹಿಸಲಾಗಿದೆ. ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ನಿಖಿಲ್ ಕುಮಾರಸ್ವಾಮಿ, ವಿನಯ್ ಗುರೂಜಿ ಮನೆಯಲ್ಲೂ ತಪಾಸಣೆ ಮಾಡಲಾಗುತ್ತದೆ.

Advertisement

ನೋಟಿಸ್‌ ಕೊಟ್ಟು ಎಲ್ಲರ ಮನೆಯಲ್ಲೂ ತಪಾಸಣೆ: ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಫ್ಓ ರವಿಂದ್ರ ಅವರು ಅರಣ್ಯ ಇಲಾಖೆಯಿಂದ ನಾಲ್ಕು ತಂಡ ರಚನೆ ಮಾಡಿದ್ದೇವೆ. ಹುಲಿ ಉಗುರು ಧರಿಸಿದ್ದ ಬಗ್ಗೆ ದೂರು ಬಂದ ಮೇರೆಗೆ ದೂರಿನಲ್ಲಿರುವ ಎಲ್ಲ ಆರೋಪಿಗಳ ಮನೆಗೆ ತೆರಳಿ ನೋಟಿಸ್ ಕೊಟ್ಟಿದ್ದೇವೆ. ಇದಾದ ನಂತರ ನೋಟಿಸ್‌ ಕೊಟ್ಟವರ ಎಲ್ಲರ ಮನೆಗೂ ತೆರಳಿ ತಪಾಸಣೆ ಮಾಡಲಾಗುತ್ತಿದೆ. ಮನೆಗಳ ಪರೀಶೀಲಿಸಿ ಉಗುರು ಪತ್ತೆಯಾದ್ರೆ ಅವರನ್ನ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ನಟ ದರ್ಶನ್ ಸೇರಿ ಎಲ್ಲಾರ ಮನೆಗೆ ನಮ್ಮ ತಂಡ ತೆರಳಿದೆ ಎಂದು ಮಾಹಿತಿ ನೀಡಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement