ಮಂಡ್ಯ : ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದ್ದು, 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಸಂಭವಿಸಿದೆ.
ಇಂದು ಬೆಳಗ್ಗಿನ ಜಾವ 5 ಗಂಟೆ ವೇಳೆಯಲ್ಲಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಸಮೀಪ ಆಕಸ್ಮಿಕವಾಗಿ ಬಸ್ನಲ್ಲಿ ಬೆಂಕಿ ಕಾಣಿಸಿದ್ದು, ಕೂಡಲೇ ಬಸ್ ಚಾಲಕ ಬಸ್ನಲ್ಲಿದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲಗೇಜ್ ಸಹಿತ ಕೆಳಗೆ ಇಳಿಯಲು ಹೇಳಿದ್ದಾನೆ. ಬಳಿಕ ಎಲ್ಲಾ ಪ್ರಯಾಣಿಕರು ಬಸ್ನಿಂದ ಕೆಳಗೆ ಇಳಿಸಿದಿದ್ದಾರೆ.
ಬಳಿಕ ಬಸ್ನಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದ್ದು, ನೋಡ ನೋಡುತ್ತಿದ್ದಂತೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ನ ಬೆಂಕಿಯನ್ನು ನಂದಿಸಿದ್ದಾರೆ. ಇನ್ನು ಈ ಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಸಂಬAಧ ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.