5 ವರ್ಷಗಳ ಹಿಂದೆ ನಡೆದ ಮಹಿಳೆಯ ಹತ್ಯೆ ಪ್ರಕರಣ – ಮೃತದೇಹಕ್ಕಾಗಿ ಶೋಧ ಆರಂಭ

ಕಾಸರಗೋಡು : 5 ವರ್ಷಗಳ ಹಿಂದೆ ಹತ್ಯೆಯಾದ ಮಹಿಳೆಯ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಮತ್ತೆ ಪ್ರಾರಂಭಿಸಿದ್ದಾರೆ. ಮೂಲತಃ ಕೊಲ್ಲಂ ಇರವಿಪುರಂ ವಾಳತ್ತಿಂಗಲ್ ವೇಳೆ ವೀಟಿಲ್ ನ ಪ್ರಮೀಳಾ (30) ಅವರು 5 ವರ್ಷಗಳ ಹಿಂದೆ ಮೃತಪಟ್ಟಿರುತ್ತಾರೆ. ಅವರ ಮೃತದೇಹವನ್ನು ಪತ್ತೆಹಚ್ಚುವ ಕಾರ್ಯಾಚರಣೆ ವಿಫಲವಾದ ಹಿನ್ನೆಲೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಇದೀಗ ಮೃತದೇಹ ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಪುನಃ ಆರಂಭಿಸಿದ್ದಾರೆ.ಮೃತ ಪ್ರಮೀಳ ಅವರ ಪತಿ ಮೂಲತ: ತಳಿಪರಂಬ ಆಲಕ್ಕೋಡು ನಿವಾಸಿ ಸೆಲ್ವರಾಜ್. ಈ ಹಿಂದೆ ಪ್ರಮೀಳಾ ಹಾಗೂ ಸೆಲ್ವರಾಜ್ ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಸರಗೋಡು ವಿದ್ಯಾನಗರದ ಪನ್ನಿಪ್ಪಾರೆಯ ಬಾಡಿಗೆ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. 2019 ಸೆ. 19ರ ರಾತ್ರಿ ದಂಪತಿ ನಡುವೆ ಜಗಳ ಉಂಟಾಗಿದ್ದು, ಆ ಬಳಿಕ ಪ್ರಮೀಳಾ ದಿಢೀರ್ ಆಗಿ ನಾಪತ್ತೆಯಾಗಿದ್ದರು. ನಂತರ ಪ್ರಮೀಳಾ ನಾಪತ್ತೆಯಾಗಿರುವ ಬಗ್ಗೆ ಪತಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement