ದಕ್ಷಣ ಕನ್ನಡ ಜಿಲ್ಲೆ: ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 6 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆಯಲ್ಲಿ ಸಂಭವಿಸಿದೆ.
ಸಂಪಾಜೆ ಪೇಟೆಯಲ್ಲೇ ಕಾರು-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಮೃತಪಟ್ಟವರ ವಿವರ ಇನ್ನೂ ಗೊತ್ತಾಗಿಲ್ಲ. ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆ ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದೆ. ಅಪಘಾತದಿಂದಾಗಿ ಸುಳ್ಯ ಮಡಿಕೇರಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜ್ಯಾಮ್ ಆಗಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.