ಸಿಧು ಮೂಸೆವಾಲಾ ಹತ್ಯೆ ಪ್ರಕರಣ – ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಾಪಾರಿಯ ಬಂಧನ

ನವದೆಹಲಿ: ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌‌ಸ್ಟರ್‌‌ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಾಪಾರಿಯನ್ನು ಬಂಧಿಸಲಾಗಿದೆ.

ಧರ್ಮಂಜೋತ್ ಸಿಂಗ್ ಕಹ್ಲೋನ್ ಎಂಬ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದ್ದು, ಆತನನ್ನು ಭಾರತಕ್ಕೆ ಕರೆತರಬಹುದು ಎಂದು ಹೇಳಲಾಗುತ್ತಿದೆ.

ಇನ್ನು ಈತ ಗ್ಯಾಂಗ್​ಸ್ಟರ್ ​​ಲಾರೆನ್ಸ್ ಬಿಷ್ಣೋಯ್ ಅವರಿಗೆ ತುಂಬಾ ನಿಕಟವಾಗಿದ್ದ ಎಂದು ಹೇಳಲಾಗಿದ್ದು, ಆತನ ಸೂಚನೆಯ ಮೇರೆಗೆ ಮೂಸೇವಾಲ ಅವರನ್ನು ಹತ್ಯೆ ಮಾಡಲಾಗಿತ್ತು.

Advertisement

ಅಮೆರಿಕದಲ್ಲಿ ಬಂಧನಕ್ಕೊಳಗಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಕಹ್ಲೋನ್, ಸಿಧು ಮುಸೆವಾಲಾ ಅವರನ್ನು ಕೊಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement