ಬೆಳೆ ನಾಶ – ಕೈ ತುಂಬಾ ಸಾಲ : ಮನನೊಂದು ರೈತ ಆತ್ಮಹತ್ಯೆ…!

ಮಳೆ ಬಾರದೆ ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು: ಮಳೆ ಬಾರದೆ ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.

ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

Advertisement

ಪರಮೇಶ್ವರಪ್ಪ (52) ಮೃತ ರೈತನಾಗಿದ್ದಾನೆ, 3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿತ್ತು,

ಬ್ಯಾಂಕ್ ಬಡ್ಡಿ ಹಾಗೂ ಕೈಸಾಲ ಸೇರಿ 5 ಲಕ್ಷ ಸಾಲ ಮಾಡಿದ್ದ ರೈತ ಪರಮೇಶ್ವರಪ್ಪ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ,

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಫಿನಾಡಿನಲ್ಲುಂಟಾದ ಬರಗಾಲದಿಂದಾಗಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement