ಇಂಡಿಯಾ-ಭಾರತ ವಿವಾದ ಕುರಿತು ಹೇಳಿಕೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ತಾಕೀತು

ನವದೆಹಲಿ:ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ. ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.

Advertisement

ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಹೀಗಾಗಿ ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ ಅದರಿಂದ ದೂರವಿರಿ ಎಂದು ತಮ್ಮ ಮಂತ್ರಿಗಳಿಗೆ ಸೂಚನೆ ಮೋದಿ ಸಂದೇಶ ರವಾನೆ ಮಾಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement