‘ಜನವರಿಯಲ್ಲಿ 5ನೇ ಗ್ಯಾರಂಟಿ ಯುವನಿಧಿ ಜಾರಿಗೆ’ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿ ಯುವನಿಧಿ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು.

ಇನ್ನು ಸಾಮಾಜಿಕ, ಆರ್ಥಿಕವಾಗಿ ದುರ್ಬಲ ಇದ್ದವರಿಗೆ ಶಕ್ತಿ ತುಂಬಬೇಕಿದೆ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಅಪಹಾಸ್ಯ ಮಾಡಿದ್ದರು. ರಾಜ್ಯ ದಿವಾಳಿ ಆಗುತ್ತೆ ಎಂದು ಅಪಹಾಸ್ಯ ಮಾಡಿದ್ದರು ಎಂದಿದ್ದಾರೆ.

Advertisement

ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದ್ದೇವೆ. ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದ್ದೇವೆ. ದೇಶದಲ್ಲಿ ಇಷ್ಟು ದೊಡ್ಡ ಯೋಜನೆ ಯಾವ ರಾಜ್ಯವೂ ಜಾರಿ ಮಾಡಿಲ್ಲ ಎಂದು ಹೇಳಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement