ಸೆ. 23 ರಂದು ‘ಒಂದು ರಾಷ್ಟ್ರ ಒಂದು ಚುನಾವಣೆ’ ಸಮಿತಿಯ ಮೊದಲ ಸಭೆ

ಹೊಸದಿಲ್ಲಿ: ‘ಒಂದು ರಾಷ್ಟ್ರ ಒಂದು ಚುನಾವಣೆ’ ಸಮಿತಿಯ ಮೊದಲ ಅಧಿಕೃತ ಸಭೆಯು ಸೆಪ್ಟೆಂಬರ್ 23 ರಂದು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಝಾದ್ ಮತ್ತು ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್,ಕೆ, ಸಿಂಗ್ ಸದಸ್ಯರಾಗಿರುತ್ತಾರೆ. ಮಾಜಿ ಲೋಕಸಭೆಯ ಕಾರ್ಯದರ್ಶಿ ಸುಭಾಷ ಸಿ, ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಹಾಗೂ ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸಹ ಸದಸ್ಯರಾಗಿರುತ್ತಾರೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್ ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿಗೆ ಸರಕಾರ ಸೂಚಿಸಿತ್ತು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement