ಬನ್ನೇರುಘಟ್ಟ ಉದ್ಯಾನವನದಲ್ಲಿ ಮಾರಕ ವೈರಸ್​​ಗೆ 7 ಚಿರತೆ ಮರಿಗಳು ಸಾವು

ಅನೇಕಲ್‌:ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್​​ಗೆ ಏಳು ಚಿರತೆ ಮರಿಗಳು ಸಾವನ್ನಪ್ಪಿವೆ.

ರಾಜ್ಯದ ನಾನಾ ಭಾಗಗಳಲ್ಲಿ ಸಿಕ್ಕ ಚಿರತೆ ಮರಿಗಳನ್ನು ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನವಕ್ಕೆ ತಂದು ಝೂನಲ್ಲಿ ಇರಿಸಲಾಗಿತ್ತು. ಆದರೆ ಈ ಚಿರತೆ ಮರಿಗಳು ಸೋಂಕಿಗೆ ಮರಣ ಹೊಂದಿದೆ.

ಈ ಮಾರಕ ರೋಗ ಆಗಸ್ಟ್ 22ರಂದು ಕಾಣಿಸಿಕೊಂಡಿತ್ತು, ಸೆಪ್ಟೆಂಬರ್ 5ರ ಒಳಗೆ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು. ಸೋಂಕು ತಗುಲಿದ ಬಳಿಕ ಜೀರ್ಣ ಕ್ರೀಯೆ ಆಗದೇ ರಕ್ತ ವಾಂತಿಯಾಗಿ ಚಿರತೆ ಮರಿಗಳು ಪ್ರಾಣ ಬಿಟ್ಟಿವೆ.

Advertisement

ಈ ಸೋಂಕು ಮನೆಯ ಸಾಕು ಬೆಕ್ಕುಗಳಿಂದ ಹರಡುತ್ತದೆ ಎನ್ನಲಾಗಿದೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್​​​ಗಳು ಊಟ ಪ್ರಾಣಿಗಳಿಗೆ ಆಹಾರ ನೀಡಲು ಹೋದಾಗ ಸೋಂಕು ಅಂಟಿರುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಡಾ.ಉಮಾಶಂಕರ್, ಡಾ. ಮಂಜುನಾಥ್ ನೇತೃತ್ವದಲ್ಲಿ 11 ಜನರ ತಂಡ ರಚಿಸಲಾಗಿದೆ. ಈಗ ಬೂಸ್ಟರ್ ಡೋಸ್ ನೀಡಿ ಪ್ರಾಣಿಗಳಿಗೆ ಸೋಂಕು ತಗುಲದಂತೆ ಕ್ರಮ ಕೈಗೊಂಡಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement