ದೊಡ್ಡಬಳ್ಳಾಪುರ ಪೊಲೀಸರ ಕಾರ್ಯಾಚರಣೆ- ರಾಷ್ಟ್ರ ಪಕ್ಷಿ ನವಿಲು ಬೇಟೆಯಾಡಿದ ಇಬ್ಬರ ಬಂಧನ..!

ರಾಷ್ಟ್ರೀಯ ಪಕ್ಷಿ ನವಿಲು ಬೇಟೆಯಾಡಿದ ಇಬ್ಬರನ್ನು ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ : ರಾಷ್ಟ್ರೀಯ ಪಕ್ಷಿ ನವಿಲು ಬೇಟೆಯಾಡಿದ ಇಬ್ಬರನ್ನು ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಾಲಾಜಿ (42) ಮತ್ತು ಶ್ರೀನಿವಾಸ್ (45) ಬಂಧಿತ ಆರೋಪಿಗಳಾಗಿದ್ದಾರೆ.

Advertisement

ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಪೆಟ್ರೋಲ್ ಬಂಕ್ ಬಳಿ ಈ ಆರೋಪಿಗಳು ಮೂರು ನವಿಲುಗಳನ್ನು ಬೇಟೆಯಾಡಿದ್ದು ಈ ಮೂವರು ಕೂಡ ಆಂಧ್ರಪ್ರದೇಶದ ಮೂಲದವರು ಎಂದು ತಿಳಿದು ಬಂದಿದೆ.

ರಾತ್ರಿ ಗಸ್ತು ತಿರುಗುವ ವೇಳೆ ಆರೋಪಿಗಳ ಮೇಲೆ ಸಂಶಯ ಬಂದು ಅವರ ದ್ವಿಚಕ್ರ ವಾಹನವನ್ನು ತಪಾಸಣೆ ಮಾಡಿದಾಗ ಚೀಲದಲ್ಲಿ ಮೂರು ನವಿಲುಗಳು ಪತ್ತೆಯಾಗಿವೆ.

ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement