ತೋಟಗಾರಿಕೆ ಇಲಾಖೆಯ ವತಿಯಿಂದ  ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಹೊಸಪೇಟೆ : ತೋಟಗಾರಿಕೆ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (PMKSY)  ಯೋಜನೆ, ಹನಿ ನೀರಾವರಿ ಯೋಜನೆ, ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ(CHD)  ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಂ.ರಮೇಶ ಅವರು ತಿಳಿಸಿದ್ದಾರೆ.

ಮನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಸಹಾಯಧನ ಪಡೆಯಲು ನೀರಾವರಿ ಸೌಲಭ್ಯವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತೀ ಸಣ್ಣ ರೈತರಿಗೆ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ರೈತರಿಗೆ ವಿವಿಧ ಬಗೆಯ ಹಣ್ಣಿನ ಬೆಳೆಗಳಾದ ದಾಳಿಂಬೆ, ಬಾಳೆ, ಪಪ್ಪಾಯ, ಡ್ರಾಗನ್ ಪ್ಯೂಟ್ ಹಾಗೂ ಇನ್ನಿತರ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಅವಕಾಶವಿರುತ್ತದೆ.

Advertisement

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (PMKSY)   ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ, ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ, ಸಮಗ್ರ ಪೋಷಕಾಂಶ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ ಮತ್ತು ಇತರೆ ತೋಟಗಾರಿಕೆಗೆ ಬೆಳೆಗಳಿಗೆ ಸಂಬAಧಿಸಿದ ಘಟಕಗಳಡಿ ಸಹಾಯಧನ ನೀಡಲಾಗುತ್ತದೆ, ಸಮಗ್ರ ತೋಟಗಾರಿಕೆ ಅಭಿವೃದ್ದಿ (CHD)  ಯೋಜನೆಯಡಿ ಹೊಸದಾಗಿ ಪ್ರದೇಶ ವಿಸ್ತರಣೆ ಕೈಗೊಳ್ಳಲು ಸಹಾಯಧನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಮೇಶ ಕೆ.ಎಂ. ಅವರ ಮೊ.8310291867, ಹೋಬಳಿ ಮಟ್ಟದ ಅಧಿಕಾರಿಗಳಾದ ಹೊಸಪೇಟೆ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ದುರುಗೇಶ ಎ. ಅವರ ಮೊ.9611227478, ಕಮಲಾಪುರದ ರೈತ ಸಂಪರ್ಕ ಕೇಂದ್ರದ ಸಹಾಯ ತೋಟಗಾರಿಕೆ ಅಧಿಕಾರಿ ವಿರೇಶ ಎಸ್.ಎಮ್. ಅವರ ಮೊ.8123465548, ಮರಿಯಮ್ಮನಹಳ್ಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ರಾಹೀಲ್ ಕೆ. ಅವರ ಮೊ.8073719905 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement