ಬೈಂದೂರು: ಕೋಮಾಸ್ಥಿತಿಯಲ್ಲಿ ಬಿದ್ದಿದ್ದ ಯುವಕನನ್ನು ಪ್ರಾಣ ಉಳಿಸಿದ ಆಂಬ್ಯುಲೆನ್ಸ್ ಸಿಬ್ಬಂದಿ

ಬೈಂದೂರು: ಬೈಂದೂರು ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾಸ್ಥಿತಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ಆಂಬ್ಯುಲೆನ್ಸ್

ಸಿಬ್ಬಂದಿಗಳು ಕರ್ತವ್ಯ ನಿಷ್ಠೆ ತೋರಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳು ರಾಜೇಶ್ (25) ಎಂದು ಗುರುತಿಸಲಾಗಿದೆ.ಮಂಗಳವಾರ ರಾತ್ರಿ 10:00ಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಬಿದ್ದ ವ್ಯಕ್ತಿಯನ್ನು ಸ್ವಚ್ಚರ್ ನಲ್ಲಿ ತಂದು ಸಿಎಸ್ಸಿ ಬೈಂದೂರ್ ಆಸ್ಪತ್ರೆಗೆ ದಾಖಲು ಮಾಡಿದರು.

Advertisement

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಸರ್ಕಾರಿ ಆಸ್ಪತ್ರೆ ಕುಂದಾಪುರ ದಾಖಲು ಮಾಡಿದ್ದಾರೆ‌. ಆಂಬ್ಯುಲೆನ್ಸ್ನ ಪೈಲೆಟ್ ಶರಣಬಸವ, ಇ ಎಂ ಟಿ ಪ್ರತಿಭಾ ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ತೋರಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement