ಬಿಹಾರದಲ್ಲಿ 22 ಮಂದಿ ನೀರಿನಲ್ಲಿ ಮುಳುಗಿ ಸಾವು

ಪಟನಾ: ತಮ್ಮ ಮಕ್ಕಳ ಒಳಿತಿಗಾಗಿ ವ್ರತ ಮಾಡುವಂಥ ಜೀವಿತ ಪುತ್ರಿಕ ಹಬ್ಬದ ಹಿನ್ನೆಲೆಯಲ್ಲಿ ನದಿಗಳಿಗೆ, ಹಳ್ಳಕೊಳ್ಳಗಳಿಗೆ ಸ್ನಾನ ಮಾಡಲು ತೆರಳಿದ್ದ 22 ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ವರದಿಯಾಗಿದೆ.

ರಾಜ್ಯದ ವಿವಿಧೆಡೆ ಪ್ರತ್ಯೇಕ ಘಟನೆಗಳಲ್ಲಿ ಈ ಸಾವುಗಳು ಸಂಭವಿಸಿದ್ದು, ಅವರಲ್ಲಿ ಬಹುತೇಕರು ಹಬ್ಬದ ಹಿನ್ನೆಲೆಯಲ್ಲಿ ನದಿಗಳಿಗೆ ಸ್ನಾನಕ್ಕೆಂದು ತೆರಳಿದ್ದವರೇ ಆಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಭೋಜಪುರದಲ್ಲಿ 5 ಮಂದಿ ನೀರಿನಲ್ಲಿ ಮುಳುಗಿ ಸತ್ತಿದ್ದರೆ, ಜೆಹನ್‌ಬಾದ್‌ನಲ್ಲಿ 4 ಮಂದಿ, ಪಾಟ್ನಾ ಮತ್ತು ರೋಹತ್ಸ್ನಲ್ಲಿ ತಲಾ ಮೂವರು, ದರ್ಭಾಂಗ ಹಾಗೂ ನವಾದದಲ್ಲಿ ತಲಾ ಇಬ್ಬರು ಮತ್ತು ಕೈಮೂರ್‌, ಮೇಧಪುರ್‌, ಔರಂಗಾಬಾದ್‌ನಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಮೃತರ ಸಾವಿಗೆ ಸಿಎಂ ನಿತೀಶ್‌ ಕುಮಾರ್‌ ಸಂತಾಪ ಸೂಚಿಸಿ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement