ಗೃಹಲಕ್ಷ್ಮಿ ಯೋಜನೆ ಮತ್ತೊಂದು ದೊಡ್ಡ ಘೋಷಣೆ!

 

ಬೆಂಗಳೂರು: ರಾಜ್ಯ ಸರ್ಕಾರ 5 ಗ್ಯಾರೆಂಟಿ ಘೋಷಣೆ ಮಾಡಿ, ಸದ್ಯ 4 ಯೋಜನೆಗಳನ್ನು ಜಾರಿಗೊಳಿಸಿದೆ. ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿ, ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಸಚಿವ H.K ಪಾಟೀಲ್ ತಿಳಿಸಿದ್ದಾರೆ

ಅದರಂತೆಯೇ ಗೃಹಲಕ್ಷ್ಮಿ ಯೋಜನೆಯಲ್ಲೂ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟವು ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸಿದೆ. ‘ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಯೋಜನೆ ಅನ್ವಯವಾಗಲಿದೆಯಂತೆ.

Advertisement

‘ಜೊತೆಗೆ ನ್ಯಾಯಾಲಯಗಳ ಸ್ಥಾಪನೆಗೆ ಸಂಪುಟ ಒಪ್ಪಿಗೆ ನೀಡಿದ್ದು, ‘ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದರು.

2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಈಗ ಜಾರಿಗೆ ಮಾಡಲಾಗುತ್ತಿದೆ ಎಂದರು. ಅಲ್ಲದೆ, ರಾಜ್ಯದಲ್ಲಿ ಈಗಾಗಲೇ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅದರ ಜೊತೆಗೆ 21 ತಾಲ್ಲೂಕುಗಳ ಸೇರಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

 

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement