‘ನನ್ನ ಮೌನ ವೀಕ್ನೆಸ್ ಅಲ್ಲ’- ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್‌

ಬೆಳಗಾವಿ:ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದೇ ದಾಟಿಯಲ್ಲಿ ಸತೀಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಣ್ಣ ಸಮಸ್ಯೆಯಿಲ್ಲ. ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವೆಲ್ಲರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.
ಮೈಸೂರು ಪ್ರವಾಸಕ್ಕೆ ತೆರಳುವ ಲಿಸ್ಟ್ ನಲ್ಲಿನಾನೂ ಕೂಡ ಇದ್ದೆ. ಎಲ್ಲರೂ ಸೇರಿ ಮೈಸೂರು ಪ್ರವಾಸಕ್ಕೆ ಹೋಗಲು ತೀರ್ಮಾನಿಸಿದ್ದೆವು. ಇದನ್ನು ಬಂಡಾಯ ಎಂದು ಬಿಂಬಿಸುವುದು ಸರಿಯಲ್ಲ ಎಂದರು. ಮೈಸೂರಿನಲ್ಲಿ ಮಹಿಳಾ ದಸರಾ ಉದ್ಘಾಟನೆ ನಾನೇ ಮಾಡಬೇಕಿತ್ತು. ಆದರೆ ಬಾಯ್ಲರ್ ಉದ್ಘಾಟನೆ ಮಾಡಬೇಕಿತ್ತು.ಅದಕ್ಕೆ ನಾನು ಬೆಳಗಾವಿಗೆ ಮರಳಿ ನಂತರ ಭದ್ರಾವತಿಗೆ ಹೋದೆ ಎಂದು ಹೇಳಿದರು.

ಮೈಸೂರು ಪ್ರವಾಸ ಕ್ಯಾನ್ಸಲ್ ಆಗಿದ್ದೇಕೆ ನನಗೆ ಗೊತ್ತಿಲ್ಲ ಸತೀಶ್ ಅವರನ್ನು ಕೇಳಿ. ಡಿಕೆಶಿ ಬೆಳಗಾವಿಗೆ ಬಂದಾಗ ಯಾರದರೂ ಶಾಸಕರು ಸ್ವಾಗತಕ್ಕೆ ಬರಬೇಕಿತ್ತು ಎಂದು ಹೇಳುವ ಮೂಲಕ ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದರು.

Advertisement

ಮೊನ್ನೆಯಷ್ಟೇ ಸತೀಶ್ ಜಾರಕಿಹೊಳಿ ಮಾತನಾಡಿ, ಡಿಕೆಶಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ತಿಂಗಳಿಂದ ಹೊಂದುಕೊಂಡು ಹೋಗುತ್ತಿದ್ದೇನೆ. ಸೈಲೆಂಟ್ ಆಗಿರೋದೇ ನನ್ನ ವೀಕ್ನೆಸ್ ಅಲ್ಲ ಎಂದು ಹೇಳಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement