‘ಆಪರೇಷನ್ ಹಸ್ತ ಅಲ್ಲ, ಆಪರೇಷನ್ ಕಮಲ ಆಗುತ್ತೆ ನೋಡಿ’ – ನಿರಾಣಿ

ಬಾಗಲಕೋಟೆ: ಲೋಕಸಭಾ ಚುನಾವಣೆಗೂ ಮೊದಲೇ ಸಾಕಷ್ಟು ಬದಲಾವಣೆ ಆಗುತ್ತೆ. ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತೆ ಕಾದುನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಮಾಧ್ಯಮಕ್ಕೆ ಮಾತನಾಡಿದ ಅವರು, ಈ ಸರ್ಕಾರ ಬಂದಮೇಲೆ ಯಾವುದೇ ಅಭಿವೃದ್ಧಿ ಕಾರ್ಯ ನಡೀತಿಲ್ಲ. ಬಿಟ್ಟಿ ಭಾಗ್ಯದಿಂದ ಈ ವರ್ಷ 25,000 ಕೋಟಿ ರೂ. ಖರ್ಚು ಮಾಡಲ್ಲ. ಇದರಿಂದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಬಹಳ ಬೇಸತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವವರಿಗೆ ಬಸ್​ನಲ್ಲಿ ಸೀಟ್ ಸಿಗುತ್ತಿಲ್ಲ. ಮನೆ, ಸಣ್ಣ ಕೈಗಾರಿಕೆಗಳಿಗೆ ಕನಿಷ್ಠ 60% ಹೆಚ್ಚುವರಿ ಬಿಲ್ ಬರುತ್ತಿದೆ. ಕರ್ನಾಟಕದಲ್ಲಿ ಈಗ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಒಬ್ಬರು ಐದು ವರ್ಷ ಸಿಎಂ ಇರಲಿ ಅಂತಾರೆ, ಇನ್ನಿಬ್ಬರು ಎರಡುವರೆ ವರ್ಷಕ್ಕೆ ಸಿಎಂ ಬದಲಾಗುತ್ತಾರೆ ಅಂತಾರೆ. ಇದನ್ನ ನೋಡಿದರೆ ಆದಷ್ಟು ಬೇಗ ಸರ್ಕಾರ ಬೀಳುತ್ತೆ ಎಂದು ಕಿಡಿಕಾರಿದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement