ಕಲ್ಯಾಣ ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಶೇ10 ರಷ್ಟು ಹಣ ಮೀಸಲು.!

 

ಬೆಂಗಳೂರು: ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಉದ್ದೇಶದಿಂದ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ನೀಡುವ ಅನುದಾನದಲ್ಲಿ ಕನಿಷ್ಠ ಶೇ 10 ರಷ್ಟನ್ನು ಈ ಭಾಗದ ವಿಶ್ವವಿದ್ಯಾಲಯಗಳ ಬಳಕೆಗೆ ಮೀಸಲಿಡಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ನಿರ್ದೇಶನ ನೀಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕೆಕೆಆರ್ಡಿಬಿಗೆ ನೀಡಿದ್ದ ₹ 3 ಸಾವಿರ ಕೋಟಿಯನ್ನು ಕಲ್ಯಾಣ ಕರ್ನಾಟಕ ಭಾಗದ ವಿವಿಧ ವಲಯಗಳಿಗೆ ಹಂಚಿಕೆ ಮಾಡಿ ಅನುಮೋದನೆಗಾಗಿ ಕಡತವನ್ನು ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಕಳುಹಿಸಿತ್ತು. ಈ ಕಡತವನ್ನು ತಮ್ಮ ಅಭಿಪ್ರಾಯ ಮತ್ತು ನಿರ್ದೇಶನದ ಸಹಿತ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

Advertisement

ಹೈದರಾಬಾದ್– ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಆದೇಶ–2023ರ ಸೆಕ್ಷನ್ 22(1) ಮತ್ತು 25ರಡಿ ರಾಜ್ಯಪಾಲರು ಈ ನಿರ್ದೇಶನ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಅನುದಾನ ಬಿಡುಗಡೆ ಮಾಡುವ ಈ ಹಿಂದಿನ ಮತ್ತು ಇನ್ನು ಮುಂದಿನ ಪ್ರಸ್ತಾವಗಳನ್ನು ಕೈಬಿಡಬೇಕು. ಅದರ ಬದಲು ನೇರವಾಗಿ ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದೂ ರಾಜ್ಯಪಾಲರು ನಿರ್ದೇಶನ ನೀಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement