ಕುಡಿದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಜೈಲರ್ ವಿಲನ್ ವಿನಾಯಕನ್ ಅರೆಸ್ಟ್

ಕೊಚ್ಚಿ: ರಜನಿಕಾಂತ್ ಅಭಿನಯದ ಜೈಲರ್ ಸಿನೆಮಾದಲ್ಲಿ ಮನೋಜ್ಞ ಅಭಿನಯ ಮಾಡಿ ಎಲ್ಲರ ಮನಗೆದ್ದಿದ್ದ ಚಿತ್ರದ ಖಳನಾಯಕ ವಿನಾಯಕನ್ ಇದೀಗ ನಿಜ ಜೀವನದಲ್ಲಿ ಖಳನಾಯಕನಾಗಲು ಹೋಗಿ ಅರೆಸ್ಟ್ ಆದ ಘಟನೆ ನಡೆದಿದೆ.

ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದ ನಟ ವಿನಾಯಕನ್ ಅವರನ್ನು ಎರ್ನಾಕುಲಂ ಉತ್ತರ ಪೊಲೀಸರು ಮಂಗಳವಾರ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ. ಅವರನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರು ವಾಸವಾಗಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿ ಜತೆಗಿನ ವಿವಾದ ಇತ್ಯರ್ಥಗೊಳಿಸಲು ವಿನಾಯಕನ್ ಅವರನ್ನು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಕ್ಕಾಗಿ ನಟ ವಿನಾಯಕನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಂತರ ನಟ ವಿನಾಯಕನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ವರದಿಗಾರರೊಂದಿಗೆ ಪ್ರತಿಕ್ರಿಯಿಸಿದ ವಿನಾಯಕನ್, ತನ್ನನ್ನು ಏಕೆ ಬಂಧಿಸಲಾಯಿತು ಎಂಬುದು ನನಗೆ ಗೊತ್ತಿಲ್ಲ. ನಾನು ಇಲ್ಲಿಗೆ ದೂರು ನೀಡಲು ಬಂದಿದ್ದೆ. ಆದರೆ ನನ್ನನ್ನು ಬಂಧಿಸಿ ಆಸ್ಪತ್ರೆಗೆ ಏಕೆ ಕರೆದೊಯ್ಯಲಾಯಿತು ಎಂಬುದನ್ನು ಪೊಲೀಸರನ್ನೇ ಕೇಳಿ ಎಂದು ಹೇಳಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement